logo
WhatsApp Image 2026-04-02 at 14.46.04.jpeg
hindalco everlast.jpeg

ನಂದಳಿಕೆಯ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ಟ್ರೆಂಡಿಂಗ್
share whatsappshare facebookshare telegram
21 Oct 2021
post image

ನಂದಳಿಕೆಯ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ ಬೆಳ್ಮಣ್ : ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಕಲ್ಲಿನಲ್ಲಿ ಕೆತ್ತಲಾದ ಶಾಸನವೊಂದು ಪತ್ತೆಯಾಗಿದೆ. ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪುರಾತತ್ವ ಶಾಸ್ತç ವಿಭಾಗದ ವಿದ್ಯಾರ್ಥಿಗಳಾದ ಕಾರ್ತಿಕ್, ಗೌತಮ್, ಶ್ರೇಯಸ್ ರವರು ಒಂದು ಶಾಸನವನ್ನು ಪತ್ತೆ ಹಚ್ಚಿದ್ದಾರೆ ಎಂದು ಪುರಾತತ್ವ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಮುರುಗೇಶಿಯವರು ತಿಳಿಸಿದ್ದಾರೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನ, ೮ ಸಾಲಿನಲ್ಲಿ ಬರೆಯಲ್ಪಟ್ಟಿದೆ. ಧೀರ್ಘ ಲಿಂಗಾಕೃತಿಯ ಕಲ್ಲಿನ ಒಂದು ಪಾರ್ಶ್ವದ ಮೇಲೆ, ವೃತ್ತಾಕಾರದ ಸೂರ್ಯ, ಅದರ ಕೆಳಭಾಗದಲ್ಲಿ ಅರ್ಧ ಚಂದ್ರಾಕೃತಿಯನ್ನು ಕೊರೆಯಲಾಗಿದೆ. ಈ ಚಿತ್ರಗಳ ಕೆಳಭಾಗದಲ್ಲಿ ದೊಡ್ಡ ದೊಡ್ಡ ಅಕ್ಷರಗಳ ಬರವಣಿಗೆಯಿದೆ. ಈ ಕಲ್ಲು ಸುಮಾರು ೧೬೭ ಸೆ.ಮೀ. ಎತ್ತರವಿದೆ.
೧೯೦೫ ರಲ್ಲಿ ಮರಣ ಹೊಂದಿದ ಬೆಣಿಯ ಅಂಕಯ್ಯ ಶೆಟ್ರ, ಮರಣ ದಾಖಲೆಯಿದು. ಸುಮಾರು ೧೧೬ ವರ್ಷಗಳ ಹಿಂದೆ ಮರಣ ಹೊಂದಿದ ಬೆಣಿಯ ಅಂಕಯ್ಯ ಶೆಟ್ಟಿ ಆ ಕಾಲದ ಪ್ರಸಿದ್ಧ ವ್ಯಕ್ತಿಯಾಗಿದ್ದಿರಬೇಕು ಎಂದು ಊಹಿಸಲಾಗಿದೆ. ಆ ವ್ಯಕ್ತಿಯ ಮರಣಾ ನಂತರ ಅವರ ಅಂತ್ಯ ಸಂಸ್ಕಾರದ ಜಾಗದಲ್ಲಿ ಈ ವಿಶಿಷ್ಠವಾದ ಕಲ್ಲನ್ನು ನಿಲ್ಲಿಸಲಾಗಿದೆ. ೨೦ ನೇ ಶತಮಾನದ ಆದಿ ಭಾಗದಲ್ಲೂ ಶಾಸನಗಳನ್ನು ಬರೆಸುವ ಪದ್ಧತಿ ಕರಾವಳಿಯಲ್ಲಿ ಜೀವಂತವಾಗಿತ್ತೆನ್ನುವುದಕ್ಕೆ ಈ ಶಾಸನ ಉತ್ತಮ ಉದಾಹರಣೆಯಾಗಿದೆ. ಶಾಸನದಲ್ಲಿ ಕ್ರಮವಾಗಿ ೧೯೦೫ ನೆ ಲೂ ಬೆಣಿಯ ಅಂಕಯ್ಯ ಶೆಟ್ರು ಎಂಬ ಬರಹವನ್ನು ಕೆತ್ತಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.