logo
WhatsApp Image 2026-04-02 at 14.46.04.jpeg
hindalco everlast.jpeg

ರಾಷ್ಟ್ರಧ್ವಜಕ್ಕೆ ಅವಮಾನ: ಮಮತಾ ಬ್ಯಾನರ್ಜಿ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಟ್ರೆಂಡಿಂಗ್
share whatsappshare facebookshare telegram
30 Mar 2023
post image

ಮುಂಬೈ : 2022ರಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪದಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೇಸು ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಕಾರ್ಯಕ್ರಮವೊಂದರಲ್ಲಿ ಮಮತಾ ಕುಳಿತೇ ರಾಷ್ಟ್ರಗೀತೆ ಹಾಡಿದ್ದರು, ಬಳಿಕ ಎದ್ದು ನಿಂತರಾದರೂ, ಒಂದೆರಡು ಸಾಲು ಹೇಳಿ ಅರ್ಧದಲ್ಲೇ ಅದನ್ನೂ ನಿಲ್ಲಿಸಿ ಕಾರ್ಯಕ್ರಮದಿಂದ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಅವರ ಕ್ರಮ ಕೋರಿ ದೂರು ದಾಖಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ಮ್ಯಾಜಿಸ್ಪ್ರೇಟ್ ಕೋರ್ಟ್ ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಮಮತಾ ಬ್ಯಾನರ್ಜಿ ಸೆಶನ್ಸ್ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ವೇಳೆ ಸೆಶನ್ಸ್ ಕೋರ್ಟ್, ಸಮನ್ಸ್ ಜಾರಿಯಲ್ಲಿ ಲೋಪವಾಗಿದೆ ಎಂದು ಹೇಳಿ, ಹೊಸದಾಗಿ ವಿಚಾರಣೆ ನಡೆಸುವಂತೆ ಮ್ಯಾಜಿಸ್ಪ್ರೇಟ್ ಕೋರ್ಟ್ಗೆ ಸೂಚಿಸಿತ್ತು. ಹೀಗಾಗಿ ತಮ್ಮ ಮೇಲಿನ ಪ್ರಕರಣವನ್ನೇ ವಜಾಗೊಳಿಸುವಂತೆ ಕೋರಿ ಮಮತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೇಸು ವಜಾಕ್ಕೆ ಹೈಕೋರ್ಟ್ ನಿರಾಕರಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.