



ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ ಬಂದು ಜಳಪ್ರಳಯವಾಗುತ್ತದೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಪರೀತವಾದ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲೋ ಹಾಕಿದ ಬಾಂಬ್ ನಮ್ಮ ರಾಷ್ಟ್ರದ ಜನರ ಮೇಲೆ ಪರಿಣಾಮ ಬೀರುತ್ತದೆ. ವಿಜಯ ದಶಮಿಯಿಂದ ಸಂಕ್ರಾತಿಯವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.
ಇದು ಬಹುದೊಡ್ಡ ದುರ್ಘಟನೆಯಾಗಿದ್ದು, ಕರುನಾಡಿಗೆ ಕೆಲವೊಂದು ಆಪತ್ತು ಇದೆ. ಕೆಲವು ಸಾವು-ನೋವು ಸಂಭವಿಸುತ್ತವೆ. ಗೌರಿಶಂಕರ ಶಿವ ಶಿವ ಎಂದಿತು. ಭೂಮಿ ನಡುಗಿತು. ಮಳೆ ಬೆಳೆ ತಲ್ಲಣಗೊಂಡಿತು. ಜನರು ತೊಂದರೆಗೆ ಒಳಗಾಗುವರು. ನಾನು ಹೇಳಿದಾಗ ಒಂದು ಘಟನೆ ಆಗಿಯೇ ಆಗುತ್ತದೆ. ಅದನ್ನು ತಪ್ಪಿಸಿಕೊಳ್ಳುವುದು ಆಳುವವರ ಕೈಯಲ್ಲಿದೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.