logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ನಾದಮಯ ಅಭಿವ್ಯಕ್ತಿ , ಚಿಂತನೆಯ ಪ್ರೌಢಿಮೆಯಿಂದ ಜೈಮಿನಿ ಭಾರತ ಸ್ಪೂರ್ತಿಯ ಆಕರ : ಡಾ . ಕಬ್ಬಿನಾಲೆ ವಸಂತ ಭಾರಧ್ವಾಜ

ಟ್ರೆಂಡಿಂಗ್
share whatsappshare facebookshare telegram
23 Apr 2024
post image

ಕಾರ್ಕಳ : ಕನ್ನಡ ಕಾವ್ಯ ಪ್ರಪಂಚದಲ್ಲಿ ಲಕ್ಷ್ಮೀಶನ ಜೈಮಿನಿ ಭಾರತ ಹಲವು ನೆಲೆಗಳಿಂದ ಸ್ಪೂರ್ತಿಯ ಆಕರವಾಗಿದೆ .ಭಾಷಾ ಪಾಂಡಿತ್ಯದಿಂದ , ಅನುಪಮ ಕಲ್ಪನಾಶೀಲತೆಯಿಂದ , ಕಾವ್ಯದಲ್ಲಿನ ಪದಪ್ರಯೋಗ , ಪ್ರಾಸ ಸೌಂದರ್ಯ , ನಾದಮಯ ಅಭಿವ್ಯಕ್ತಿ , ಚಿಂತನೆಯ ಪ್ರೌಢತೆ ಇವೆಲ್ಲ ಮುಂಬರುವ ಹಲವು ತಲೆಮಾರುಗಳಿಗೆ ಸಹಸ್ರ ಕವಲುಗಳ ಒಂದು ದೊಡ್ಡ ಒರತೆಯಾಗಿದೆ ಎಂದು ವಿದ್ವಾಂಸ , ಅಷ್ಟಾವಧಾನಿ ಡಾ . ಕಬ್ಬಿನಾಲೆ ವಸಂತ ಭಾರದ್ವಾಜ ನುಡಿದರು . ಅವರು ಗುಪ್ತಗಾಮಿನಿ ಸಾಹಿತ್ಯ ಶಾಲೆ ಈದು ಕಾರ್ಕಳ ವತಿಯಿಂದ ಅನಂತಶಯನ ವಿಶ್ವೇಶ್ವರ ವೇಣುಗೋಪಾಲ ದೇವಸ್ಥಾನದ ಸಭಾಂಗಣದಲ್ಲಿ ಅಭಿಜಾತ ಕವಯಿತ್ರಿ ಕೊಪ್ಪಲ ಸುಶೀಲಾಬಾಯಿ ನೆನಪಿನ ಕಾರ್ಯಕ್ರಮದಲ್ಲಿ ' ಜೈಮಿನಿ ಭಾರತ ಕಾವ್ಯ ಸೌಂದರ್ಯ ' ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು . ಕಾರ್ಕಳ ತಾಲೂಕು ಚಿತ್ಪಾವನ ಬ್ರಾಹ್ಮಣ ಸಮಾಜದ ಅಧ್ಯಕ್ಷ ರತ್ನಾಕರ ಮರಾಠೆ , ಗಾಯಕ ಅನಂತಪದ್ಮನಾಭ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು . ಶ್ರಾವಣಿ ಶಾಸ್ತ್ರಿ ಸ್ವಾಗತಿಸಿದರು .ಕೆ . ಶ್ರೀಕರ ಭಟ್ ಪ್ರಾಸ್ತಾವಿಕ ಮಾತನಾಡಿದರು .ವಿಜಯನಾರಾಯಣ ಕಾರ್ಯಕ್ರಮ ನಿರ್ವಹಿಸಿದರು .ಜಗದೀಶ ಗೋಖಲೆ ವಂದಿಸಿದರು .

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.