



ಉಡುಪಿ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಶನಲ್ ಪಿ.ಯು ಕಾಲೇಜು ಬಾರ್ಕೂರು ಇಲ್ಲಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ಐವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 30 ಸೆಕೆಂಡ್ ಡಬಲ್ ಅಂಡರ್ ವಿಭಾಗದಲ್ಲಿ ಚಿನ್ಮಯ್ ದೇಶಪಾಂಡೆ ಹಾಗೂ ಸುಹಾಸ್ ಗಣೇಶ್ ರಾವ್, 30 ಸೆಕೆಂಡ್ ಸ್ಪೀಡ್ ವಿಭಾಗದಲ್ಲಿ ಅರ್ಜುನ್ ಪೈ, ಹಾಗೂ 3 ಮಿನುಟ್ಸ್ ಎಂಡರೆನ್ಸ್ ವಿಭಾಗದಲ್ಲಿ ಶ್ರೇಯಸ್ ಭಟ್ ಹಾಗೂ ಮಾನ್ಯ ಎಂ.ಎ. ಪ್ರಥಮ ಸ್ಥಾನ ಪಡೆದ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅದ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.