logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕುಂಬಮೇಳದ ಕಾಲ್ತುಳಿತದಲ್ಲಿ ಕನ್ನಡಿಗರೂ ನಾಪತ್ತೆ!

ಟ್ರೆಂಡಿಂಗ್
share whatsappshare facebookshare telegram
29 Jan 2025
post image

ಬೆಂಗಳೂರು: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಸಂಗಮ್ ಘಾಟ್‌ನಲ್ಲಿ ಆಯೋಜಿಸಲಾಗಿರುವ ಅತೀ ದೊಡ್ಡ ಧಾರ್ಮಿಕ ಸಭೆಯಾದ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನ್ನಡಿಗರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆಂದು ತಿಳಿದುಬಂದಿದೆ.

ಬೆಳಗಾವಿಯಿಂದ 60ಕ್ಕೂ ಹೆಚ್ಚು ಜನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದು, ಕೆಲವರಿಗೆ ಗಾಯಗಳಾಗಿವೆ ಎಂಬ ವರದಿಗಳಿಂದ ತಿಳಿದುಬಂದಿದೆ. ಬೆಳಗಾವಿಯಿಂದ ಬಸ್ ನಲ್ಲಿ ತೆರಳಿದ್ದರು. ಈ ಪೈಕಿ ಕೆಲವರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ.

ಸರೋಜಿನಿ ನಡುವಿನಹಳ್ಳಿ ಎಂಬುವವರುಮಾತನಾಡಿ, ಎರಡು ಬಸ್‌ಗಳಲ್ಲಿ 60 ಜನರು ಮಹಾಕುಂಭ ಮೇಳಕ್ಕೆ ಬಂದಿದ್ದೆವು. ಇದ್ದಕ್ಕಿದ್ದಂತೆ ಕಾಲ್ತುಳಿತ ಉಂಟಾಯಿತು. ನಮ್ಮ ಜೊತೆ ಬಂದವರಲ್ಲಿ ನಾಲ್ಕೈದು ಜನ ಕಾಣುತ್ತಿಲ್ಲ. ನಮ್ಮದು ಒಂಭತ್ತು ಜನರ ಗುಂಪು ಇತ್ತು. ಇದರಲ್ಲಿ ಮೂರ್ನಾಲ್ಕು ಜನರು ಇಲ್ಲೇ ಇದ್ದಾರೆ. ಉಳಿದವರು ಕಾಣುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.