



ಕಾರ್ಕಳ : ಬೈಕ್ ಗೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪಿದ ಘಟನೆ ಜಾರ್ಕಳ ಜಂಕ್ಷನ್ ಬಳಿ ನಡೆದಿದೆ.ಮಹಾಲಿಂಗ ಎಂಬುವರು ಮೃತಪಟ್ಟ ಸವಾರ
ಮಹಾಲಿಂಗ ಅವರು ಸಹಾಸವರಾರೋರ್ವರನ್ನು ಕುಳ್ಳಿರಿಸಿಕೊಂಡು ಬೈಕ್ ನಲ್ಲಿ ಎರ್ಲಪ್ಪಾಡಿ ರಸ್ತೆ ಕಡೆಯಿಂದ ಜಾರ್ಕಳ ರಸ್ತೆ ಕಡೆಗೆ ಬರುತ್ತಿರುವಾಗ ಜಾರ್ಕಳ ಜಂಕ್ಷನ್ ತಲುಪುವಾಗ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ K.S.R.T.C ಬಸ್ಸನ್ನು ಅದರ ಚಾಲಕ ಅತಿ ವೇಗದಿಂದ ಚಲಾಯಿಸಿಕೊಂಡು ಬಂದು ಮಹಾಲಿಂಗರವರ ಬೈಕ್ ಗೆ ಡಿಕ್ಕಿ ಹೊಡೆದಿದ್ದು
ಪರಿಣಾಮ ಬೈಕ್ ಸವಾರರಿಬ್ಬರು ಬೈಕ್ ಸಮೇತ ರಸ್ತೆಯ ಮೇಲೆ ಬಿದ್ದ ಪರಿಣಾಮ ಬೈಕ್ ಜಖಂಗೊಂಡಿದ್ದು, ಮಹಾಲಿಂಗರವರು ಧರಿಸಿದ ಹೆಲ್ಮೆಟ್ ಕೂಡ ಜಖಂಗೊಂಡಿತ್ತು
ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಮಹಾಲಿಂಗರವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.