



ಕಾರ್ಕಳ: ಬಾವಿಯ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಲು ಹೋದಂತಹ ವ್ಯಕ್ತಿ, ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಾಳ ಗ್ರಾಮದ ಮಂಜಲ್ತಾರು ಕಡಾರಿ ಬಳಿ ನಡೆದಿದೆ. ಕಡಾರಿ ಬಳಿ ನಿವಾಸಿ ಸುಂದರಿ ಎಂಬವರ ಮಗ ಭೋಜ (37) ನೇಣಿಗೆ ಶರಣಾದ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಜೀವನದಲ್ಲಿ ಜುಗುಪ್ಪೆಗೊಂಡು ಮನೆ ಸಮೀಪದ ಬಾವಿಯ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದರು. ಈ ವೇಳೆ ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.