



ಕಾರ್ಕಳ: ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿ ಎಂಬಲ್ಲಿ ನಡೆದಿದೆ. ಬಜಗೋಳಿ ನಿವಾಸಿ ಶೇಖರ (40) ನಾಪತ್ತೆಯಾದ ವ್ಯಕ್ತಿ. ಇವರು ನವೆಂಬರ್ 24ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.