



ಕಾರ್ಕಳ: ಶ್ರೀಮಾರಿಯಮ್ಮ ಶ್ರೀಕ್ಷೇತ್ರದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯು ಜನವರಿ ೧೦ ಸೋಮವಾರದಂದು ಆರಂಭಗೊಳ್ಳಲಿದೆ . ಸರ್ವ ಧರ್ಮಿಯರು ಆರಾಧಿಸಿಕೊಂಡು ಬಂದಿರುವ ಶ್ರೀ ಕ್ಷೇತ್ರವು ೯ ಮಗಣೆಗೆ ಒಳಗೊಂಡಿದೆ. ಎಲ್ಲ ಜಾತಿಯವರನ್ನು ಒಂದೇ ವೇದಿಕೆಯಡಿಯಲ್ಲಿ ತಂದು ಸ್ಥಳೀಯ ಶಾಸಕ ಹಾಗೂ ಸಚಿವ ವಿ.ಸುನೀಲ್ಕುಮಾರ್ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರದ ಜೀಣೋದ್ಧಾರ ಸಮಿತಿ ರೂಪುಗೊಂಡಿದೆ ಶ್ರೀ ಕ್ಷೇತ್ರದಲ್ಲಿ ಗುರುವಾರದಂದು ಆಯೋಜಿಸಿದ ಸುದ್ದಿ ಗೋಷ್ಠಿಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್ ತಿಳಿಸಿದರು
ಕೇರಳದ ಪೊದುವಾಳ್ ಅವರು ಅಷ್ಟಮಂಗಲ ಪ್ರಶ್ನಾ ಚಿಂತನೆಯು ನಡೆಯಲಿದೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಹವಾಲ್ದಾರ್, ಕೆ.ಜೆ. ಗುರುಪ್ರಸಾದ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ವಿಜಯ ಶೆಟ್ಟಿ, ನವೀನ್ ದೇವಾಡಿಗ, ನವೀನ್ ನಾಯಕ್, ಪ್ರಶಾಂತ್ ರಾವ್, ಭಾಸ್ಕರ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.