



ಕಾರ್ಕಳ: ಕಾರ್ಕಳ ತಾಲೂಕಿನ ಶ್ರೀ ಕೃಷ್ಣ ದೇವಸ್ಥಾನ ಜಂಕ್ಷನ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಕುಂಟಲ್ಪಾಡಿ ಕಡೆಯಿಂದ ಆನೆಕೆರೆ ಕಡೆಗೆ ತೆರಳುತ್ತಿದ್ದ ತೆಳ್ಳಾರು ನಿವಾಸಿ ಅಂಕಿತ ಅವರ ಕಾರಿಗೆ ಆನೆಕೆರೆ ಶ್ರೀ ಕೃಷ್ಣ ದೇವಸ್ಥಾನದ ಜಂಕ್ಷನ್ ಬಳಿ ಬಂಗ್ಲೆಗುಡ್ಡೆ ಕಡೆಯಿಂದ ಪುಲ್ಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಕಾರು ಜಖಂ ಗೊಂಡು ಸುಮಾರು 3 ಲಕ್ಷ ರೂ.ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.