



ಕಾರ್ಕಳ:
ಬೈಕ್ ವೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಸಬಾ ಗ್ರಾಮದ ಕೃಷ್ಣಗಿರಿ ಕ್ರಾಸ್ ಬಳಿ ನ.2ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು 46ವರ್ಷದ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಇವರು ನಿನ್ನೆ ಮಧ್ಯಾಹ್ನ ತನ್ನ ಸ್ಕೂಟರ್ ನಲ್ಲಿ ನಕ್ರೆ ಜಂಕ್ಷನ್ ಕಡೆಗೆ ಬರುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಎಡಬದಿಯಲ್ಲಿರುವ ಚರಂಡಿಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಗೆ ದಾಖಲಿಸಿದ್ದು ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ. ಕಾರ್ಕಳ ನಗರ ಪೊಲೀಸ್ ಪ್ರಕರಣದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.