logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
9 Dec 2021
post image

ಕಾರ್ಕಳ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕ್ರೀಟಾಪಟು ರೋಹಿತ್ ಕುಮಾರ್ ಕಟೀಲ್ ಹಾಗು ಪತ್ರಕರ್ತೆ ಯು.ಬಿ ರಾಜಲಕ್ಷ್ಮಿ ಯವರಿಗೆ ಹುಟ್ಟೂರ ಅಭಿನಂದನಾ ಕಾರ‍್ಯಕ್ರಮ ಡಿ.11 ರಂದು ಸಂಜೆ 4 ಘಂಟೆಗೆ ಕಾರ್ಕಳದ ಕಟೀಲ್ ಇಂಟರ್ ನ್ಯಾಶನಲ್ ಬಳಿಯ ಶಾಂಭವಿ ಫಾಮ್ಹೌಸ್‌ನಲ್ಲಿ ನಡೆಯಲಿದೆ ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ತಿಳಿಸಿದರು .ಕಾರ್ಕಳದ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್, ಹಿರಿಯ ನ್ಯಾಯವಾದಿ. ಕೆ. ವಿಜಯ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ , ಹಿರಿಯ ಉದ್ಯಮಿಗಳು ಶ್ರೀ ಬೋಳ ಪ್ರಭಾಕರ ಕಾಮತ್, ರ‍್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ , ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ| ಮಂಜುನಾಥ ಕೋಟ್ಯಾನ್, ಬಿಲ್ಲವ ಸಮಾಜಅಧ್ಯಕ್ಷ ಡಿ. ಆರ್. ರಾಜು, ಉದ್ಯಮಿಗಳಾದ ಕರಿಯಣ್ಣ ಶೆಟ್ಟಿ, ಶಿವರಾಮ ಶೆಟ್ಟಿ ಅಜೆಕಾರು , ಮಹೇಶ್ ಶೆಟ್ಟಿ, ಕುಡುಪುಲಾಜೆ , ಸಿನಿಮಾ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ , ಕನ್ನಡ ಚಲನಚಿತ್ರ ನಟಿಯರಾದ ದುನಿಯ ರಶ್ಮಿ, ಬಾವನಾ , ಭಾಗವಹಿಸಲಿದ್ದಾರೆ , ಕಾರ್ಯಕ್ರಮವು ಸರಕಾರದ ಕೋವಿಡ್ ಮಾರ್ಗಸೂಚಿಯನ್ನು ಅಳವಡಿಸಿಕೊಂಡು ನಡೆಯಲಿದೆ ಎಂದು ತಿಳಿಸಿದರು . ಪತ್ರಿಕಾಗೋಷ್ಠಿಯಲ್ಲಿ ಕಾರ‍್ಯಕ್ರಮದ ಸಂಘಟಕರಾದ ಮಣಿರಾಜ್ ಶೆಟ್ಟಿ ,ಚೇತನ್ ಶೆಟ್ಟಿ ಕೊರಳ , ಸುಭಿತ್ ಎನ್ ಆರ್ , ಅವಿನಾಶ್ ಶೆಟ್ಟಿ , ಹರ‍್ಮನ್ ಕ್ಯಾಸ್ಟಲಿನೋ ಉಪಸ್ಥಿತರಿದ್ದರು .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.