



ಕಾರ್ಕಳ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಮನಗಂಡು ಕಳ್ಳರು ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ ಘಟನೆ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮದ ಜಾರ್ಕಳ ಕುಕ್ಕುಂದೂರು ವಿಜೇಂದ್ರ ನಾಯಕ್ಎಂಬವರ ಮನೆಯಲ್ಲಿ ನಡೆದಿದೆ ಜ ೧೧ ರಂದು ಮನೆಯಿಂದ ಹೊರಗೆ ಹೋಗಿದ್ದ ವಿಜೇಂದ್ರ ನಾಯಕ್ ಕುಟುಂಬವು ಜ.೧೪ ರಂದು ಮನೆಗೆ ಹಿಂದಿರುಗಿ ಬಂದಾಗ ಕಳ್ಳತನವಾಗಿರುವುದು ತಿಳಿದುಬಂದಿದ್ದು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಮನಗಂಡ ಕಳ್ಳರು ಬಾಗಿಲನ್ನು ಮುರಿದು ಒಳ ಪ್ರವೇಶಿಸಿ ಮನೆಯಲ್ಲಿದ್ದ ಬೆಳ್ಳಿಯ ವಸ್ತುಗಳು ,ವಾಚ್ ಸೇರಿದಂತೆ ಒಟ್ಟು ೩೫ ಸಾವಿರ ಮೌಲ್ಯದ ಸಾಮಾಗ್ರಿಗಳನ್ನು ಕಳವುಗೈದಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.