



ಕಾರ್ಕಳ: ಕಾರ್ಕಳ ಕಸಬಾ ಗ್ರಾಮದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು 1.45 ರೂ ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಕಾರ್ಕಳ ಮಠದ ಬೆಟ್ಟು ಎಂಬಲ್ಲಿ ಜೂ.2 ರ ಮಧ್ಯಾಹ್ನ ನಡೆದಿದೆ. ಕೆ. ದೀಪಕ್ ಭಟ್ ಎಂಬವರಿಗೆ ಸೇರಿದ ಧ್ವನಿ ಎಂಟರ್ ಪ್ರೈಸಸ್ ಎಂಬ ಹಾರ್ಡ್ ವೇರ್ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು .ದೀಪಕ್ ಭಟ್ ಅವರು ಅಂಗಡಿಯಲ್ಲಿ ಇಲ್ಲದ ಸಮಯದಲ್ಲಿ ಅಂಗಡಿಗೆ ಬಂದಿದ್ದ ಇಬ್ಬರು ಕಳ್ಳರು ಅಂಗಡಿಯಲ್ಲಿ ಇದ್ದ ಅಶೋಕ ಅವರ ಬಳಿ 4 ಚೀಲ ಸಿಮೆಂಟ್ ಬೇಕಾಗಿದ್ದು ಅಂಗಡಿಯ ಪಕ್ಕದಲ್ಲಿರುವ ಇಂಚರ ಎಂಬ ಮನೆಗೆ ಹಾಕುವಂತೆ ತಿಳಿಸಿದ್ದಾರೆ. ಅದರಂತೆ ಅಶೋಕರವರು ಸಿಮೆಂಟ್ ಚೀಲವನ್ನು ಇಂಚರ ಎಂಬ ಮನೆಗೆ ಹಾಕಿ ವಾಪಾಸ್ಸು ಅಂಗಡಿಗೆ ಬಂದಾಗ ಅಂಗಡಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಇರಲಿಲ್ಲ. ಈ ವೇಳೆ ಅಂಗಡಿಯ ಒಳಗೆ ನೋಡಿದಾಗ ಮೇಜಿನ ಡ್ರಾವರನ್ನು ಒಡೆದು ಅದರೊಳಗಿದ್ದ 1,45,000 ರೂ. ಹಣವನ್ನು ಕಳವು ಮಾಡಿಕೊಂಡು ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ. ದೀಪಕ್ ಭಟ್ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.