logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಕಡ್ತಲ ಪಂಚಾಯತ್‌ ಮಾಜಿ ಅಧ್ಯಕ್ಷರ ಮೇಲೆ ಮಾನಹಾನಿಕರ ಫೋಸ್ಟ್: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ..!

ಟ್ರೆಂಡಿಂಗ್
share whatsappshare facebookshare telegram
27 Aug 2024
post image

ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಫೇಕ್ ಐಡಿಯ ಮೂಲಕ ಅವಹೇಳನಕಾರಿ, ಮಾನಹಾನಿಕರ ಸಂದೇಶ ಪೋಸ್ಟ್ ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಕುಲಾಲ ಸಂಘ ಪೆರ್ಡೂರು ಆಗ್ರಹಿದ್ದಾರೆ.

ಕಡ್ತಲ ಮತ್ತು ಅಂಡಾರು ಗ್ರಾಮದ ರಸ್ತೆ ಹಾಳಾಗಿ ಹದಗೆಟ್ಟಿದ್ದನ್ನು ದುರಸ್ತಿ ಪಡಿಸುವ ಸಲುವಾಗಿ ಪಂಚಾಯತ್ ನ ಮಾಜಿ ಅಧ್ಯಕ್ಷೆ ಹಾಗೂ ಎರಡು ಗ್ರಾಮದ ಗ್ರಾಮಸ್ಥರು ಅಂಡಾರು ಗ್ರಾಮದಲ್ಲಿ ಪ್ರತಿಭಟನೆ ಮಾಡಿದ್ದರು. ಪ್ರತಿಭಟನೆಯ ವಿಡಿಯೋ ತುಣುಸು ಯುಟ್ಯೂಬ್ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು.

ಈ ವಿಡಿಯೋಗೆ ಫೇಕ್ ಐಡಿಯ ಮೂಲಕ ಅವಹೇಳನಕಾರಿ ಮತ್ತು ಮಾನಹಾನಿಕಾರಕ ಸಂದೇಶ ಕಮೆಂಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ಬರೆದಿದ್ದಾರೆ. ಈ ಸಂದೇಶವನ್ನು ಸಂದೀಪ್ ಶೆಟ್ಟಿ ಕುಕ್ಕುಜೆ ಹಾಗೂ ಪುರಂದರ ನಾಯಕ್ ಕಡ್ತಲ ಅವರು ವಾಟ್ಸಾಪ್ ಗ್ರೂಪ್ ಗಳಿಗೆ ಹರಿಯಬಿಟ್ಟಿದ್ದಾರೆ. ಇದರಿಂದ ಮಾಜಿ ಅಧ್ಯಕ್ಷೆಗೆ ಮಾನಹಾನಿಯಾಗಿದ್ದು, ತಪ್ಪಿತಸ್ಥರ ವಿರುದ್ಧ ದೂರು ನೀಡಲಾಗಿದೆ. ಹಾಗೂ ಈ ಬಗ್ಗೆ ಉಡುಪಿ ಎಸ್ಪಿ ಅವರಿಗೆ ಮನವಿ ಮಾಡಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಕುಲಾಲ ಸಂಘ ಪೆರ್ಡೂರು ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.