



ಕಾರ್ಕಳ : ಇನ್ನೋವಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ
ಬೆಳ್ಮಣ್ ಸಮೀಪದ ನಂದಳಿಕೆ ಮಾವಿನ ಕಟ್ಟೆ ಬಳಿ
ಜುಲೈ10 ರಂದು ನಡೆದಿದೆ.ಇಬ್ಬರು ಅಣ್ಣತಮ್ಮಂದಿರು
ಸಂದೀಪ್ ಸತೀಶ್ ಮೃತಪಟ್ಟರು.
ನಿಟ್ಟೆಯಿಂದ ನಂದಳಿಕೆ ಕಡೆಗೆ ಬರುತಿದ್ದ ಬೈಕ್ ನಲ್ಲಿ ಸಂದೀಪ್ ಸತೀಶ್ ಬರುತಿದ್ದು , ಪಡುಬಿದ್ರೆಯಿಂದ ವೇಗವಾಗಿ ಬರುತಿದ್ದ ಇನ್ನೋವಾ ಬೈಕ್ ಗೆ ಢಿಕ್ಕಿ ಹೊಡೆದಿದೆ .ಪರಿಣಾಮವಾಗಿ ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದು ,ಇನ್ನೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೋಲಿಸರು ಸ್ಥಳಕ್ಕೆ ಅಗಮಿಸಿ ತನಿಖೆ ನಡೆಸುತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.