



ಕಾರ್ಕಳ: ಮೊಬೈಲ್ ಹಿಡಿದುಕೊಂಡಿರುವುದನ್ನು ಗಮನಿಸಿ ಅಣ್ಣ ಬುದ್ದಿವಾದ ಹೇಳಿದಕ್ಕೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಡಿ3 ರಂದು ನಡೆದಿದೆ. ಕೀರ್ತನಾ (20) ಆತ್ಮಹತ್ಯೆ ಮಾಡಿಕೊಂಡವಳು . ಕಾರ್ಕಳದ ಎಂಪಿಎಂ ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ.ಎ. ಓದುತಿದ್ದು ಅವಳ ಅಣ್ಣ ಶಶಿಕಿರಣ್ ನೀನು ಓದುವುದನ್ನು ಬಿಟ್ಟು ಇದೇ ರೀತಿ ಮೊಬೈಲ್ ನೋಡುವುದಾದರೆ ನಾಳೆಯಿಂದ ಕಾಲೇಜಿಗೆ ಹೋಗುವುದು ಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಅಣ್ಣ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಆಕೆ ದುಡುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಕಾರ್ಕಳ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.