



ಕಾರ್ಕಳ: ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಂಡಿರುತ್ತದೆ. . ರಾಜ್ಯವು ಪ್ರಥಮ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ನ್ನು ಪದವಿ ಹಂತದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯ ಆಗುವ ಹಾಗೆ ವಿಶ್ವವಿದ್ಯಾನಿಲಯಗಳಲ್ಲಿ ಜಾರಿಗೆ ಬಂದಿದೆ ಹಾಗೂ 2020-21 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ತರಗತಿಗಳು ಕೂಡ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನ್ವಯ ನಡೆಯುತ್ತಿದೆ. ಪ್ರಾರಂಭಿಕ ಹಂತದಲ್ಲಿ ಸ್ವಲ್ಪ ಮಟ್ಟಿಗೆ ಗೊಂದಲಗಳು, ತೊಂದರೆ ವಿದ್ಯಾರ್ಥಿಗಳಿಗೆ ಆದರೂ ಸಹ ನಂತರದ ದಿನದಲ್ಲಿ ಅದು ಸರಿ ಆಯಿತು. ಆದರೆ ಇನ್ನು ಮುಂದಿನೆ 2021-22 ನೇ ಶೈಕ್ಷಣಿಕ ವರ್ಷಕ್ಕೆ ಪದವಿಗೆ ದಾಖಲಾಗುವ ಪ್ರಸ್ತುತ ಇರುವ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನಮ್ಮ ಮಂಗಳೂರು ವಿಶವ್ವಿದ್ಯಾನಿಲಯದ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನ್ವಯ ಇರುವಂತಹ ಪಠ್ಯಕ್ರಮಗಳ ಬಗ್ಗೆ ತಿಳಿಸಲು ಹಾಗೂ ರಾಜ್ಯ ಸರಕಾರವು ಪ್ರಾರಂಭ ಮಾಡಿರುವ ಹೊಸ ದಾಖಲಾತಿಯ ತಂತ್ರಾಂಶ UUCMS (ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ಸಮಗ್ರ ನಿರ್ವಹಣಾ ವ್ಯವಸ್ಥೆ) ಬಗ್ಗೆ ತಿಳಿದುಕ್ಕೊಳ್ಳಲು ನಾವು ಮಂಗಳೂರು ವಿಶ್ವವಿದ್ಯಾನಿಲಯದ ನೇತ್ರತ್ವದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕಾರ್ಯಗಾರವನ್ನು ತಾಲೂಕಿನ ಆಯ್ದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ (ಪತ್ರದಲ್ಲಿ ನಮೂದಿಸಿದ ಕಾಲೇಜುಗಳ) ಎಪ್ರಿಲ್ ೧ ರಂದು ಸಮಯ 9.15 ಕ್ಕೆ ಬಾಹುಬಲಿ ಪ್ರವಚನ ಮಂದಿರ ಕಾರ್ಕಳದಲ್ಲಿ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.