



ಕಾರ್ಕಳ:ನಕ್ಸಲ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ.ಕೃಷ್ಣಾ ಮೂರ್ತಿ ಮತ್ತು ನಕ್ಸಲ್ ಸದಸ್ಯೆ ಸಾವಿತ್ರಿ ಯವರನ್ನು ಕಾರ್ಕಳ, ಹೆಬ್ರಿ ,ಅಜೆಕಾರು ಠಾಣೆಗಳ ವ್ಯಾಪ್ತಿಯ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸ್ ಹಾಗೂ ನ್ಯಾಯಾಂಗ ತನಿಖೆಗಾಗಿ ಚಿಕ್ಕಮಂಗಳೂರಿನಿಂದ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಕಾರ್ಕಳಕ್ಕೆ ಕರೆತರಲಾಯಿತು. . 12 ಕ್ಕೂ ಅಧಿಕ ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗೆ ಒಳಪಡಿಸಲಾಗುವುದು. ಪಶ್ಚಿಮ ಘಟ್ಟ ತಪ್ಪಲು ಪ್ರದೇಶ,ಕಾರ್ಕಳ ತಾಲೂಕಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು
ಕೃಷ್ಣಮೂರ್ತಿ ಅವರು ಕರ್ನಾಟಕದ ಶೃಂಗೇರಿಯವರು. ನಕ್ಸಲ್ ವಲಯದಲ್ಲಿ ಅವರನ್ನು ‘ಬಿಜಿಕೆ’ ಎಂದೇ ಕರೆಯಲಾಗುತಿತ್ತು. ಸಿಪಿಐನ (ಮಾವೊವಾದಿ) ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ಕಾರ್ಯನಿರ್ವಹಿಸುತಿದ್ದರು
ಕರ್ನಾಟಕ ಮತ್ತು ವಯನಾಡು ಗಡಿ ಪ್ರದೇಶದಲ್ಲಿ ಎಟಿಎಸ್ ನಡೆಸಿದ ಕಾರ್ಯಾಚರಣೆ ವೇಳೆ ಪಶ್ಚಿಮ ಘಟ್ಟವಲಯ ಸಮಿತಿ ಕಾರ್ಯದರ್ಶಿ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿದಳಂ ಕೇಡರ್ನ ಸಾವಿತ್ರಿಯನ್ನು ಬಂಧಿಸಲಾಗಿತ್ತು . ಕೃಷ್ಣಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದ ವ್ಯಕ್ತಿಯಾಗಿದ್ದರೆ, ಸಾವಿತ್ರಿ ಚಿಕ್ಕಮಗಳೂರು ಜಿಲ್ಲೆ ಕಳಸಮೂಲದವಳು.
ಕೃಷ್ಣಮೂರ್ತಿ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದವನು. ಶಿವಮೊಗ್ಗದಲ್ಲಿ ನ್ಯಾಯಾಂಗ ಪದವಿ ಪಡೆದಿದ್ದ ಈತ, ಅಲ್ಲಿಯೇ ಸಾಕಷ್ಟುಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಪಶ್ಚಿಮ ಘಟ್ಟ ಉಳಿಸಿ ಹೋರಾಟ, ಕುದುರೆಮುಖ ಉಳಿಸಿ ಮೊದಲಾದ ಹೋರಾಟಗಳ ಮೂಲಕ ಪ್ರವರ್ಧಮಾನಕ್ಕೆ ಬಂದು ಬಳಿಕ ಇದ್ದಕ್ಕಿದ್ದಂತೆ ನಕ್ಸಲ್ ವಲಯದಲ್ಲಿ ಕಾಣಿಸಿಕೊಂಡಿದ್ದ. ಬಳಿಕ ಕರ್ನಾಟಕದಲ್ಲಿ ನಕ್ಸಲ್ ಚಳವಳಿಯನ್ನು ಕಾಯ್ದಿಡುವಲ್ಲಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.
ಹೊಸಗದ್ದೆ ಮೂಲದ ಪ್ರಭಾ ಎಂಬ ನಕ್ಸಲ್ ಕಾರ್ಯಕರ್ತೆಯನ್ನು ವಿವಾಹವಾಗಿದ್ದ ಈತ, ಕರ್ನಾಟಕ ಭಾಗದಲ್ಲಿ ನಕ್ಸಲ್ ಸಂಘಟನೆಗೆ ಹಿನ್ನಡೆಯಾದ ಬಳಿಕ ಕೇರಳದತ್ತಮುಖ ಮಾಡಿದ್ದ. ಈತನ ವಿರುದ್ಧ ಚಿಕ್ಕಮಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಹತ್ಯೆ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2005ರಲ್ಲಿ ಸಾಕೇತ್ ರಾಜನ್ ಹತ್ಯೆ ನಂತರ ಅವರು ಪಕ್ಷದ ನಾಯಕತ್ವ ವಹಿಸಿಕೊಂಡರು. ಸಾವಿತ್ರಿ ಅವರು ಸಂಘಟನೆಯ ‘ಕಬನಿ ದಳಂ’ನ ಕಮಾಂಡರ್ ಆಗಿದ್ದ.
2008ನೇ ಮೇ 15ರಂದು ಸೀತಾನದಿಯ ನಾಡ್ಪಾಲಿನಲ್ಲಿ ಶಿಕ್ಷಕ ಭೋಜಶೆಟ್ಟಿ ಮತ್ತು ಅವನ ಚಿಕ್ಕಮ್ಮನ ಮಗ ಸುರೇಶ್ ಶೆಟ್ಟಿ ನಕ್ಸಲರಿಂದ ಹತ್ಯೆಗೊಳಗಾಗಿದ್ದರು. 2008ರ ಡಿಸೆಂಬರ್ 7 ರಂದು ಕುಂದಾಪುರ ಹಳ್ಳಿಹೊಳೆಯ ಕೃಷಿಕ ಕೇಶವ ನಕ್ಸಲಿಗೆ ಬಲಿ, 2011ರ ಡಿಸೆಂಬರ್ 19ರಂದು ಕಬ್ಬಿನಾಲೆ ತಿಂಗಳಮಕ್ಕಿ ಬಳಿ ಸದಾಶಿವ ಶೆಟ್ಟಿ ಹತ್ಯೆ, ಮುಟ್ಲುಪಾಡಿಯ ಕುಟ್ಟಿ ಶೆಟ್ಟಿಯವರಿಗೆ ಬೆದರಿಕೆ, ಹೆಬ್ರಿಯ ಮತ್ತಾವಿನ ಬಳಿ ಪೊಲೀಸ್ ಜೀಪ್ ಸ್ಫೋಟ ಮುಂತಾದ ಹಲವಾರು ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.