logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಅಪರಿಚಿತ ವ್ಯಕ್ತಿಗಳಿಂದ ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ: ಪ್ರಕರಣ ದಾಖಲು..!

ಟ್ರೆಂಡಿಂಗ್
share whatsappshare facebookshare telegram
25 Sept 2024
post image

ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ ಎಂಟಿಎಂ ಕೇಂದ್ರಕ್ಕೆ ಹೋಗಿದ್ದರು. ಅಲ್ಲಿ ಹಣ ತೆಗೆಯಲು ಹೋದಾಗ ಎರಡು ಜನ ಅಪರಿಚಿತ ವ್ಯಕ್ತಿಗಳಿದ್ದು, ಅವರು ಸಮೀನಾ ಅವರ ಗಮನವನ್ನು ಬೇರೆ ಕಡೆ ಸೆಳೆದು ಅವರ ಗಮನಕ್ಕೆ ಬಾರದಂತೆ ಎಟಿಎಂ ಕಾರ್ಡ್ ಬದಲಾವಣೆ ಮಾಡಿದರೆನ್ನಲಾಗಿದೆ.

ನಂತರ ಕಳ್ಳರು, ಸಮೀನಾ ಅವರ ಸೇರಿದ ಎಟಿಎಂ ಕಾರ್ಡನ್ನು ಬಳಸಿಕೊಂಡು ಕಾರ್ಕಳ ಬಂಡಿಮಠ ಎಂಬಲ್ಲಿರುವ ಎಂಟಿಎಂನಿಂದ 70,000 ರೂ. ಡ್ರಾ ಮಾಡಿ ಮೋಸ ಮಾಡಿರುವುದಾಗಿ ದೂರಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.