



ಕಾರ್ಕಳ: ನಗರದ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಅನಾರೋಗ್ಯದ ಕಾರಣ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಠಾಣಾ ವ್ಯಾಪ್ತಿಯ ನಿವಾಸಿ ದರ್ಣಪ್ಪ (61) ಆತ್ಮಹತ್ಯೆ ಮಾಡಿಕೊಂಡವರು. ಸುಮಾರು 2 ವರ್ಷಗಳ ಹಿಂದೆ ರಸ್ತೆ ಅಪಘಾತದಿಂದ ದರ್ಣಪ್ಪ ಅವರ ಎಡಗೈಗೆ ಉಂಟಾದ ಗಾಯದ ನೋವು ಆಗಾಗ ಬರುತ್ತಿರುವುದರಿಂದ ಕೆಲಸ ಮಾಡಲು ಕಷ್ಟವಾಗುತ್ತಿತ್ತು. ಇದರಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಏ.24 ರಂದು ಸಂಜೆ ವೇಳೆ ಕೀಟನಾಶಕವನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ಈ ವೇಳೆ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಸ್ಪಂದಿಸದೇ ನಿನ್ನೆ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.