



ಕಾರ್ಕಳ : ಅನಾರೋಗ್ಯದಿಂದ ಬಳಲುತಿದ್ದ ವೃದ್ಧೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬದ ನೆಕ್ಲಾಜೆ ಬಳಿ ಫೆ.೧೩ ಎಂದು ನಡೆದಿದೆ.. ಪ್ರೇಮಾ ರಾವ್ (೮೦) ಮೃತಪಟ್ಟವರು . ಅನಾರೋಗ್ಯದಿಂದ ಬಳಲುತಿದ್ದ ಪ್ರೇಮ ರಾವ್ ಸ್ಥಳಿಯ ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತಿದ್ದರು. ಫೆ. ೧೩ ರಂದು ಮಧ್ಯಾಹ್ನ ಪಕ್ಕದ ಮನೆಗೆ ಹೋದವರು ಬಳಿಕ ನಾಪತ್ತೆಯಾಗಿದ್ದರು ಮನೆಯವರು ಹುಡುಕಾಡಿದಾಗ ಮನೆಯ ಹಿಂಬದಿಯ ಬಾವಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಅವರನ್ನು ಮೇಲಕ್ಕೆತ್ತಿ ಸರಕಾರಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿದಾಗ ಪ್ರೇಮಾ ರಾವ್ ಮೃತಪಟ್ಟಿರುವುದು ದೃಢಪಟ್ಟಿದೆ . ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆÀ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.