



ಬೈಲೂರು: ಮದ್ಯ ಸೇವಿಸಿ ಅಜಾಗರೂಕತೆಯಿಂದ ಟಿಪ್ಪರ್ ಚಾಲನೆ ಮಾಡಿಕೊಂಡು ಬಂದ ಚಾಲಕನೋರ್ವ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೂರು ವಾಹನಗಳನ್ನು ಜಖಂಗೊಳಿಸಿದಘಟನೆ ಕಾರ್ಕಳ ತಾಲೂಕಿನ ಬೈಲೂರು ಪಳ್ಳಿ ಕ್ರಾಸ್ ಬಳಿ ಇಂದು ಮದ್ಯಾನ ನಡೆದಿದೆ. ಟಿಪ್ಪರ್ ಉಡುಪಿಯಿಂದ ಕಾರ್ಕಳ ಕಡೆಗೆ ಬರುತಿತ್ತು. ಟಿಪ್ಪರ್ ಚಾಲಕ ಮದ್ಯಪಾನ ಸೇವಿಸಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ .ಅಪಘಾತ ದ ತೀವ್ರತೆಗೆ ಟಾಟಾ ಎಸ್ , ವ್ಯಾಗನರ್ ವಾಹನಗಳ ಮುಂಭಾಗವು ಜಖಂ ಗೊಂಡಿದೆ . ಯಾವುದೇ ಪ್ರಾಣ ಅಪಾಯ ವಾಗಿಲ್ಲ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.