



ಕಾರ್ಕಳ : ಗ್ರಾಮ ಲೆಕ್ಕಾಧಿಕಾರಿಯೊಬ್ಬಳು ಕೆಲಸದ ಒತ್ತಡದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹುಡ್ಕೋ ಕಾಲನಿಯಲ್ಲಿ ಜುಲೈ24 ರಂದು ನಡೆದಿದೆ. ಕು. ಸುಶ್ಮಿತಾ (26)ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ 6 ವರ್ಷಗಳಿಂದ ಕಾರ್ಕಳ ತಾಲೂಕು ಕಛೇರಿಯಲ್ಲಿ ಗ್ರಾಮ ಲೆಕ್ಕ ಅಧಿಕಾರಿ ಯಾಗಿ ಕೆಲಸಮಾಡುತಿದ್ದರು
ಕಳೆದ 6 ವರ್ಷಗಳಿಂದ ಕಾರ್ಕಳ ತಾಲೂಕು ಕಛೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು,. ಕೆಲವು ದಿನಗಳಿಂದ ಕರ್ತವ್ಯದ ಒತ್ತಡದಿಂದ , ವೈದ್ಯರಲ್ಲಿ ಚಿಕಿತ್ಸೆ ಪಡೆದಿದ್ದರು. ಜುಲೈ 24 ರಾತ್ರಿ 11 ಘಂಟೆ ಸಮಯದಲ್ಲಿ ಊಟ ಮಾಡಿ ಮಲಗಿದ್ದಾಗ ಸುಶ್ಮಿತಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿ ದ್ದಾರೆ. ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.