



ಕಾಸರಗೋಡು: ಮಂಗಳವಾರ ರಾತ್ರಿ ಚಟ್ಟಂಚಾಲ್ ನಲ್ಲಿ ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತ ಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ತೆಕ್ಕಿಲ್ ಬೆಂಡಿಚ್ಚಾಲ್ ನ ಮುಹಮ್ಮದ್ ತಸ್ಲೀಮ್ (20) ಮೃತಪಟ್ಟ ವಿದ್ಯಾರ್ಥಿ. ಚಟ್ಟಂಚಾಲ್ ಸಬ್ ಟ್ರೆಜರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಸ್ಲೀಮ್ ಮಂಗಳೂರಿನ ಕಾಲೇಜೊಂದರ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.