logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾಸರಗೋಡು: ವಿಷ ಸೇವಿಸಿ ಯುವ ದಂಪತಿ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
7 Oct 2025
post image

ಕಾಸರಗೋಡು: ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27).

ಅಜಿತ್ ಪೈಂಟಿಂಗ್ ಕಾರ್ಮಿಕ ರಾಗಿದ್ದು , ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ನ ಖಾಸಗಿ ಶಾಲಾ ಶಿಕ್ಷಕಿ ಯಾಗಿದ್ದರು. ಸೋಮವಾರ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಇದ್ದ ಇಬ್ಬರನ್ನು ದೇರಳ ಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ರಾತ್ರಿ ಹಾಗೂ ಶ್ವೇತಾ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸೋಮವಾರ ಅಜಿತ್ ಮೂರು ವರ್ಷದ ತನ್ನ ಮಗ ಸಹಿತ ಬಂದ್ಯೋಡಿ ನಲ್ಲಿರುವ ಸಹೋದರಿ ಮನೆಗೆ ಬಂದಿದ್ದು, ಬೇರೆ ಕಡೆಗೆ ತೆರಳಲಿದ್ದು, ಮಗನನ್ನು ನೋಡಿ ಕೊಳ್ಳುವಂತೆ ಹೇಳಿ ತೆರಳಿದ್ದರು ಎನ್ನಲಾಗಿದೆ. ಮಗನನ್ನು ಸಹೋದರಿ ಮನೆಯಲ್ಲಿ ಬಿಟ್ಟು ಮರಳಿದ ಅಜಿತ್ ಹಾಗೂ ಪತ್ನಿ ಶ್ವೇತಾ ವಿಷ ಸೇವಿಸಿದ್ದಾರೆ. ಬಿದ್ದಿದ್ದ ಇಬ್ಬರನ್ನು ಪರಿಸರವಾಸಿಗಳು ಗಮನಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರೂ ಮೃತ ಪಟ್ಟಿದ್ದಾರೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.