



ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ. ಫೆ.26 ರಂದು ಉಗ್ರರ ದಾಳಿಗೆ ಸಂಜಯ್ ಶರ್ಮಾ (40) ಎಂಬಾತ ಬಲಿಯಾಗಿದ್ದಾರೆ. ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಸಂಜಯ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ತೀವ್ರ ಗಾಯಗೊಂಡ ಸಂಜಯ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಗಂಭೀರ ಗಾಯಗೊಂಡ ಕಾರಣ ಅವರು ಮೃತಪಟ್ಟಿದ್ದಾರೆ. ಜಮ್ಮು & ಕಾಶ್ಮೀರದ ಬ್ಯಾಂಕ್ ವೊಂದರಲ್ಲಿ ಸೆಕ್ಯೂರಿಟ್ ಗಾರ್ಡ್ ಆಗಿ ಸಂಜಯ್ ಶರ್ಮಾ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.