logo
WhatsApp Image 2026-04-02 at 14.46.04.jpeg
hindalco everlast.jpeg

ಕಟಪಾಡಿ: ಮನೆಮಂದಿಗೆ ಮಂಕುಬೂದಿ ಎರಚಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾದ ಖದೀಮರು.!

ಟ್ರೆಂಡಿಂಗ್
share whatsappshare facebookshare telegram
10 Dec 2021
post image

ಕಟಪಾಡಿ: ಮೂವರು ಫಕೀರನ ವೇಷಧಾರಿಗಳು ಮನೆ ಮಂದಿಗೆ ಮಂಕುಬೂದಿ ಎರಚಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿಗೊಂಡು ಪರಾರಿಯಾದ ಘಟನೆ ಕಟಪಾಡಿಯ ಅಗ್ರಹಾರ ಸಮೀಪ ಬುಧವಾರ ನಡೆದಿದೆ. ಫಕೀರನ ವೇಷ ಧರಿಸಿಕೊಂಡು ಬಂದಿದ್ದ ಮೂವರು ಖದೀಮರು ಕಟಪಾಡಿಯ ಅಗ್ರಹಾರದ ಮನೆಗೆ ಬಂದಿದ್ದು, ತಮ್ಮ ತಂತ್ರವನ್ನು ಬಳಸಿ ಮನೆಯವರಿಗೆ ಮಂಕುಬೂದಿ ಎರಚಿದ್ದಾರೆ. ಖದೀಮರ ತಂತ್ರಕ್ಕೆ ಬಲಿಪಶುಗಳಾದ ಮನೆಯವರು ತಮ್ಮ ಸ್ವಪ್ರಜ್ಞೆಯನ್ನು ಕಳೆದುಕೊಂಡಿದ್ದರು. ತಮ್ಮಲ್ಲಿರುವ ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ತಮ್ಮ ಕೈಯಾರೇ ಖದೀಮರಿಗೆ ತಂದುಕೊಟ್ಟಿದ್ದಾರೆ ಎನ್ನಲಾಗಿದೆ. ಬಳಿಕ ಅಲ್ಲಿಂದ ಫಕೀರನ ವೇಷಧಾರಿಗಳು ಪರಾರಿಯಾಗಿದ್ದಾರೆ. ಇವರು ರಸ್ತೆಯಲ್ಲಿ ನಡೆದುಕೊಂಡು ಬರುವ ಹಾಗೂ ಹೋಗುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.