logo
WhatsApp Image 2026-04-02 at 14.46.04.jpeg
hindalco everlast.jpeg

ಖಡಕ್ ಹಿರಿಯಡಕ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಶಿರ್ವ ಠಾಣೆಗೆ..!

ಟ್ರೆಂಡಿಂಗ್
share whatsappshare facebookshare telegram
20 Apr 2025
post image

ಉಡುಪಿ: ಹಿರಿಯಡಕ ಠಾಣೆಯಲ್ಲಿ ಕಾರ್ಯನಿರ್ವಾಹಿಸುತ್ತಿದ್ದ ಖಡಕ್ ಪೊಲೀಸ್ ಅಧಿಕಾರಿ ಮಂಜುನಾಥ ಮರಬದ ಅವರನ್ನು ಶಿರ್ವ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆ ಮಾಡಿ, ಪೊಲೀಸ್ ಮಹಾ ನಿರೀಕ್ಷಕರು ಪಶ್ಚಿಮ ವಲಯ ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನವರಾದ ಮಂಜುನಾಥ್ ಅವರು, 2020ರ ಬ್ಯಾಚಿನ ಸಬ್ ಇನ್ಸ್ಪೆಕ್ಟರ್. ಉಡುಪಿಯಲ್ಲಿ ಇತ್ತೀಚಿಗೆ ಸಂಚಲನ ಹುಟ್ಟಿಸಿದ ಗರುಡ ಗ್ಯಾಂಗ್ ಪ್ರಕರಣದಲ್ಲಿ, ಗರುಡ ಗ್ಯಾಂಗ್ ಸದಸ್ಯ ಇಸಾಕ್ ಶೂಟೌಟ್ ಪ್ರಕರಣದಲ್ಲಿ ಮತ್ತು ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ ನ ಆರೋಪಿಯ ಹೆಡೆಮುರಿ ಕಟ್ಟಿದ ತಂಡದಲ್ಲಿ ಖಡಕ್ ಅಧಿಕಾರಿಯಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ. ಕಳೆದ ಎರಡು ವರ್ಷದಿಂದ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪಿಎಸ್ಐ (L&O)ಆಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಶಿರ್ವ ಪೊಲೀಸ್ ಠಾಣೆಗೆ ಪಿಎಸ್ಐ L&O ( law and order) ನಿಯೋಜಿಸಲಾಗಿರುತ್ತದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.