logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕೊಲ್ಲೂರು : ಮಗನನ್ನು ರಕ್ಷಣೆ ಮಾಡಲು ನದಿಗೆ ಧುಮುಕಿದ ತಾಯಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
11 Sept 2022
post image

ಬೈಂದೂರು: ತಾಲೂಕಿನ ಕೊಲ್ಲೂರು ಗ್ರಾಮದ ಸೌರ್ಪಾಣಿಕ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಗನನ್ನು ರಕ್ಷಣೆ ಮಾಡಲು ನದಿಗೆ ಧುಮುಕಿದ ಪ್ರವಾಸಿ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಸೆ.10ರಂದು ನಡೆದಿದೆ. ಕೇರಳದ ತಿವೇಂಡ್ರಂ ಜಿಲ್ಲೆಯ ಕಾಚಾಗಡ ಗ್ರಾಮದ ನಿವಾಸಿ 42 ವರ್ಷದ ಚಾಂದಿ ಶೇಖರ್ ನೀರಿನಲ್ಲಿ ಕೊಚ್ಚಿಹೋದ ಮಹಿಳೆ. ಇವರು ಪತಿ ಮುರುಗನ್, ಮಗ ಆದಿತ್ಯನ್ ಹಾಗೂ ರಕ್ತ ಸಂಬಂಧಿಗಳೊಂದಿಗೆ ಒಣಂ ಹಬ್ಬದ ಪ್ರಯುಕ್ತ ಕೇರಳದಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರವಾಸ ಕೈಗೊಂಡಿದ್ದರು. ನಿನ್ನೆ ಕೊಲ್ಲೂರು ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದು, ಸಂಜೆ ವೇಳೆ ಕುಟುಂಬದವರೊಂದಿಗೆ ಸೌರ್ಪಾಣಿಕ ಘಟ್ಟಕ್ಕೆ ಹೋಗಿದ್ದರು. ಈ ವೇಳೆ ನದಿದಡದಲ್ಲಿ ಸ್ನಾನ ಮಾಡುತ್ತಿರುವಾಗ ಚಾಂದಿ ಶೇಖರ್ ಅವರ ಪತಿ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿದ್ದರು. ಅವರನ್ನು ರಕ್ಷಣೆ ಮಾಡಲು ಮಗ ಆದಿತ್ಯನ್ ಧುಮುಕಿದ್ದು, ಆತನು ನೀರಿನಲ್ಲಿ ಕೊಚ್ಚಿ ಹೋಗಿದ್ದನು. ಆತನನ್ನು ರಕ್ಷಣೆ ಮಾಡಲು ಈಜು ಬಾರದ ಆತನ ತಾಯಿ ಚಾಂದಿಶೇಖರ್ ನೀರಿಗೆ ಧುಮುಕಿ ನೀರಿನ ಸೆಳತಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ಪತಿ ಮುರುಗನ್ ಮತ್ತು  ಮಗ ಆದಿತ್ಯನ್ ರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.. ಈ ಬಗ್ಗೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.