logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಕೆಲಸಕ್ಕೆಂದು ಸಾಗರಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
2 Dec 2022
post image

ಕುಂದಾಪುರ: ಕೆಲಸದ ನಿಮಿತ್ತ ಸಾಗರಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಬಳಿಕ‌ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕುಂದಾಪುರ ಆನಗಳ್ಳಿ ಗ್ರಾಮದಲ್ಲಿ ನಡೆದಿದೆ. ಆನಗಳ್ಳಿ ಗ್ರಾಮದ ನಿವಾಸಿ 37ವರ್ಷದ ವಿಘ್ನೇಶ್ ಪೂಜಾರಿ ನಾಪತ್ತೆಯಾದ ವ್ಯಕ್ತಿ. ಇವರು ಮಂಗಳೂರು, ಸಿದ್ದಾಪುರ, ಹೊಸನಗರ ಮುಂತಾದ ಕಡೆಗಳಲ್ಲಿ ಅಲ್ಯೂಮಿನಿಯಮ್ ಕೆಲಸ ಮಾಡಿಕೊಂಡಿದ್ದರು. ಅಕ್ಟೋಬರ್ 31ರಂದು ಬೆಳಿಗ್ಗೆ ಆನಗಳ್ಳಿಯ ಮನೆಯಿಂದ ಕೆಲಸದ ಹಿನ್ನೆಲೆಯಲ್ಲಿ  ಸಾಗರಕ್ಕೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ಬಳಿಕ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ, ಸಾಗರದ ಕೆಲಸ ಮಾಡುವ ಸ್ಥಳಕ್ಕೂ ತೆರಳದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರುತ್ತದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.