logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಆಲೂರು ಗ್ರಾಮದಲ್ಲಿ ಕೃಷಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಸಾವು

ಟ್ರೆಂಡಿಂಗ್
share whatsappshare facebookshare telegram
15 Jul 2022
post image

ಕುಂದಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಜಾರಿಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಆಲೂರು ಗ್ರಾಮದ ಕಾಳಿಕಾಂಬ ನಗರದಲ್ಲಿ ಜುಲೈ 14ರಂದು ಸಂಜೆ ನಡೆದಿದೆ. ಮೃತರನ್ನು ಮೂಲತ ಬಾಗಲಕೋಟೆ ತಾಲೂಕಿನ ಹಂಡರಗಲ್‌ಗ್ರಾಮದ 38ವರ್ಷದ ಸಂಗಪ್ಪ ಎಂದು ಗುರುತಿಸಲಾಗಿದೆ. ಇವರು ಸುಮಾರು 1 ತಿಂಗಳಿನಿಂದ ಅಲೂರು ಗ್ರಾಮದ ಸುಭಾಸ್ ಶೆಟ್ಟಿ ಅವರ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಅಲ್ಲೆ ಶೆಡ್‌ನಲ್ಲಿ ವಾಸವಾಗಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಕೃಷಿ ನೀರಿನ ಹೊಂಡಕ್ಕೆ ಕೈ ಕಾಲು ತೊಳೆಯಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ . ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.