logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ : ಆನಗೋಡು ಬಳಿ ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ: 3 ಲಾರಿ ವಶ

ಟ್ರೆಂಡಿಂಗ್
share whatsappshare facebookshare telegram
21 Sept 2022
post image

ಕುಂದಾಪುರ: ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.. ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಮ ದೇವಸ್ಥಾನದ ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತ್ರಾಸಿ ವ್ಯಾಪ್ತಿಯ ಅನಧಿಕೃತ ಮರಳು ದಕ್ಕೆಗಳಿಗೆ ದಾಳಿಯಾಗುತ್ತಿದ್ದಂತೆ, ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ , ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲೂಕು ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೂವಿಜ್ಞಾನಿಯವರು ತಿಳಿಸಿರುತ್ತಾರೆ. ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಸದರಿ ಲಾರಿಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.