logo
WhatsApp Image 2026-04-02 at 14.46.04.jpeg
hindalco everlast.jpeg

ಕುವೈತ್: ಬೃಹತ್ ರಕ್ತ ದಾನ ಶಿಬಿರ

ಟ್ರೆಂಡಿಂಗ್
share whatsappshare facebookshare telegram
7 Dec 2021
post image

ಕುವೈಟ್ ಸಿಟಿ: ಕನ್ನಡ ನಟ ಹಾಗೂ ಸಮಾಜ ಸೇವಕ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಕಾರ್ಯಗಳನ್ನು ಸ್ಮರಿಸಿ ಗೌರವಿಸುವ ಸಲುವಾಗಿ ಕುವೈಟ್‌ನ ಭಾರತೀಯ ಪ್ರವಾಸಿ ಪರಿಷತ್ (ಬಿಪಿಪಿ) ಕರ್ನಾಟಕ ವಿಭಾಗ ಮತ್ತು ಬಿಡಿಕೆ ಕುವೈಟ್ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತು. ಈ ಶಿಬಿರವನ್ನು ಭಾರತ-ಕುವೈಟ್ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವ ಮತ್ತು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವನ್ನು ಆಚರಿಸುವ ಸಲುವಾಗಿಯೂ ಆಯೋಜಿಸಲಾಗಿದೆ. ಆದಾನ್ ಕೊಅಪರೇಟಿವ್ ಬ್ಲಡ್ ಟ್ರಾನ್ಸ್‌ಫ್ಯೂಸನ್ ಸೆಂಟರ್‌ನಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ 1 ರಿಂದ 6 ರವರೆಗೆ ಶಿಬಿರ ನಡೆದಿದ್ದು, ಇದು ಕುವೈಟ್‌ನಲ್ಲಿರುವ ಭಾರತೀಯ ವಲಸಿಗರಿಂದ ಅದ್ಬುತ ಪ್ರತಿಕ್ರಿಯೆಯನ್ನು ಪಡೆದಿದೆ ಮತ್ತು ಸುಮಾರು 125 ದಾನಿಗಳು ರಕ್ತದಾನ ಮಾಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.