



ಅಜೆಕಾರು: ಮಹತೋಭಾರ ಇರ್ವತ್ತೂರು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಎಳ್ಳಾರೆ ಇಲ್ಲಿ ಊರಿನ ಹತ್ತು ಸಮಸ್ತರ ಒಗ್ಗೂಡುವಿಕೆಯಲ್ಲಿ ಕ್ಷೇತ್ರದ ಪ್ರಧಾನ ದೇವರಾದ ಶ್ರೀ ಲಕ್ಷ್ಮೀ ಜನಾರ್ದನ ದೇವರಿಗೆ ಲಕ್ಷ ತುಳಸಿ ಅರ್ಚನೆ ಸೇವೆಯು ನಡೆಯಿತು.
ಇದೇ ಸಂದರ್ಭದಲ್ಲಿ ಪಂಚಮಿ ಚಾರಿಟೇಬಲ್ ಟ್ರಸ್ಟ್ (ರಿ), ದೊಂಡೆರಂಗಡಿ ಇವರ ಕೊಡುಗೆಯ ಸೇವಾ ಕಛೇರಿಯನ್ನು ಟ್ರಸ್ಟ್ ನ ಅಧ್ಯಕ್ಷ ಶ್ರೀಯುತ ಪುರಂದರ ಪೂಜಾರಿ ಇವರು ದೇವರಿಗೆ ಅರ್ಪಿಸಿದರು.
ಈ ಸುಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ದೇವಸ್ಥಾನದ ಅನುವಂಶೀಯ ಅರ್ಚಕ ವರ್ಗದವರು, ಚಾಕರಿ ವರ್ಗದವರು ಮತ್ತು ಊರಿನ ಗಣ್ಯ ರೊಂದಿಗೆ ಹತ್ತು ಸಮಸ್ತರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.