



ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ಗುರುವಾಯನಕೆರೆ ನಾರಾವಿಯಲ್ಲಿ ಚಿತ್ತಾರ ಕೇಂದ್ರೀಕೃತ ಭತ್ತ ನರ್ಸರಿಗೆ ಚಾಲನೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ಗುರುವಾಯನಕೆರೆನಾರಾವಿ ಯಲ್ಲಿ ಚಿತ್ತಾರ ಕೇಂದ್ರೀಕೃತ ಭತ್ತ ನರ್ಸರಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಜಿಲ್ನಾಯ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಅಶೋಕ್ ಕುಮಾರ್ ಜೈನ್ ರವರು ಭತ್ತ ಕೃಷಿಗೆ ನರ್ಸರಿ ತುಂಬಾ ಅವಶ್ಯಕತೆ ಇದ್ದು ನಮ್ಮ ಭಾಗದಲ್ಲಿ ಯಾಂತ್ರಿಕೃತ ವಾಗಿ ಭತ್ತ ಬೇಸಾಯ ಮಾಡಲು ರೈತರಿಗೆ ತುಂಬಾ ಅನುಕೂಲವಾಗಿದೆ ಕಡಿಮೆ ಖರ್ಚಲ್ಲಿ ಪ್ರಶಾಂತ್ ರವರು ನರ್ಸರಿ ಮಾಡಿ ಕೊಡುತ್ತಿರುವುದು ರೈತರಿಗೆ ತುಂಬಾ ಅನುಕೂಲವಾಗಿದೆ ಎಂದು ಶುಭನುಡಿದರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಮೇಲ್ವಿಚಾರಕರಾದ ಕೃಷ್ಣರವರು ಮುಂಗಾರು ಹಾಗೂ ಹಿಂಗಾರು ಬತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿಸಲು ಪ್ರಶಾಂತ್ ಚಿತ್ತಾರ್ ರವರಿಗೆ ಯೋಜನೆ ವತಿಯಿಂದ ತರಬೇತಿಯನ್ನು ನೀಡಲಾಗಿದೆ 10000 ಸಸಿ ಮಡಿಗೆ ಬೇಕಾಗಿರುವ ಮಣ್ಣು ಸಂಗ್ರಹಣೆ ಮಾಡಲಾಗಿದೆ ಟ್ರೇ ಗಳನ್ನು chsc ಕೇಂದ್ರ ದಿಂದ ಪಡೆಯಲಾಗಿದ್ದು ಒಂದು ಎಕ್ರೆ ಗೆ 70ರಿಂದ 80 ಸಸಿ ಮಡಿ ಬೇಕಾಗಿದ್ದು ಪ್ರಶಾಂತ್ ರವರು ಒಂದು ಸಸಿ ಮಡಿಗೆ ತಯಾರಿಸಿ ಕೊಡಲು 50 ರಿಂದ 60 rs ಪಡೆದು ತಯಾರಿ ಮಾಡಿ ಕೊಡುತ್ತಾರೆ ಈಗಾಗಲೇ 1000 ಸಸಿ ಮಡಿಗೆ ಬೇಡಿಕೆ ಬಂದಿದ್ದು ಎಲ್ಲಾ ರೈತರು ನರ್ಸರಿ ಯ ಪ್ರಯೋಜನ ಪಡೆದುಕೊಳಬೇಕು ಎಂದು ಮಾತನಾಡಿದರು Chsc ಬೆಳ್ತಂಗಡಿ ಮೆನೇಜರ್ ಸಚಿನ್ ಕುಮಾರ್ ಮಾತನಾಡಿ ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ನಮ್ಮಲ್ಲಿ ರೈಡಾನ್ ಹಾಗೂ ವಾಕ್ behind ನಾಟಿ ಮಷಿನ್ ಹಾಗೂ ಉಳುಮೆ ಗೆ ಬೇಕಾದ ಟ್ರ್ಯಾಕ್ಟರ್ ಕಡಿಮೆ ಬಾಡಿಗೆ ಗೆ ಸಿಗುವುದಾಗಿ ಮಾತನಾಡಿದರು ವಲಯ ಅಧ್ಯಕ್ಷರುಆದ ಅಶೋಕ್ MK, ನಾರಾವಿ chsc ಮೆನೇಜರ್ ಸಚಿನ್ ಪ್ರಗತಿ ಪರ ರೈತ ರಾದ ರವಿ ರಾಮ ಭಟ್, ಹರೀಶ್, ಗಂಗಾಧರ ಗೌಡ, ರಾಜು ಪೂಜಾರಿ, ಸುಧಾಕರ ಬೊಲ್ಲೊಟ್ಟು, ಅಣ್ಣಿ ಸಾಲಿಯಾನ್, ಸೇವಾಪ್ರತಿನಿಧಿ ಶುಭ ಹಾಗೂ ಸ್ಥಳೀಯ ರೈತರು ಊರಿನ ಗಣ್ಯರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.