logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಲಿಕಾದೀಪ ಯೋಜನೆ: 1,145 ಶಾಲೆಗಳಿಗೆ ವಿಸ್ತರಿಸಿದ ಶಿಕ್ಷಣ ಇಲಾಖೆ.

ಟ್ರೆಂಡಿಂಗ್
share whatsappshare facebookshare telegram
18 Sept 2025
post image

ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್‌ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಎಕ್‌ಸ್ಟೆಪ್‌ ಫೌಂಡೇಶನ್‌ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ‘ಕಲಿಕಾ ದೀಪ’ ಕಾರ್ಯಕ್ರಮದ ಭಾಗವಾದ ಯೋಜನೆಯನ್ನು ಕೊಪ್ಪಳ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲೇ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಇತರೆ ಎಲ್ಲ ಶಾಲೆಗಳಲ್ಲೂ ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯಿಂದ 1,44,062 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದ್ದು, ₹1.38 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇಂಟರ್‌ನೆಟ್‌ ಶುಲ್ಕ, ಹೆಡ್‌ ಫೋನ್‌ಗಳ ಖರೀದಿ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲು ಅನುದಾನ ಬಳಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.