logo
WhatsApp Image 2026-04-02 at 14.46.04.jpeg
hindalco everlast.jpeg

ಉರುಳಿಗೆ ಸಿಲುಕಿ ಚಿರತೆ ಮರಿ ಸಾವು..! ಈರ್ವರ ವಿರುದ್ಧ ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
30 Aug 2023
post image

ಸುಳ್ಯ: ಸುಮಾರು ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿಂದ ವರದಿಯಾಗಿದೆ.

ಈ ಹಿನ್ನೆಲೆ ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಆ.29ರಂದು ಮಧ್ಯಾಹ್ನದ ವೇಳೆಗೆ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಸಂದರ್ಭ ಅಧಿಕಾರಿಗಳು ತನಿಖೆ ನಡೆಸಿದಾಗ ಆರೋಪಿತರ ಬೇಲಿಯಲ್ಲಿ ಈ ಉರುಳು ಪತ್ತೆಯಾದ ಹಿನ್ನೆಲೆ ಇಬ್ಬರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.