



ಮಂಗಳೂರು: ಕಳೆದ ದಿನ(ಅ.26) ಮೆಲ್ಕಾರ್ ನಲ್ಲಿ ಚೂರಿ ಇರಿತ ಪ್ರಕರಣ ನಡೆದಿದ್ದು ಮೂವರಿಗೆ ಗಾಯವಾಗಿದೆ.
ಹುಲಿ ವೇಷ ಹಾಕುವ ಎರಡು ತಂಡಗಳ ನಡುವೆ ಎರಡು ದಿನಗಳ ಹಿಂದೆ ಶಾರದೋತ್ಸವ ವೇಳೆ ಗಲಾಟೆ ನಡೆದಿತ್ತು. ಈ ಗಲಾಟೆ ಮುಂದುವರಿದಿದ್ದು, ನಿನ್ನೆ ರಾತ್ರಿ ಇತ್ತಂಡಗಳ ನಡುವೆ ಜಗಳವಾಗಿದೆ. ಈ ವೇಳೆ ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುಗಳಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.