



ಬೆಂಗಳೂರು : ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು,ಮಂಗಳೂರು ವಿ.ವಿ.ಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಮಂಗಳೂರು ವಿವಿಯು ನ್ಯಾಕ್ 'ಎ' ಗ್ರೇಡ್ನಲ್ಲಿತ್ತು. ಈಗ 'ಬಿ' ಗ್ರೇಡ್ಗೆ ಬಂದಿದೆ. ವಿಶ್ವ ವಿದ್ಯಾಲಯದ ಗುಣಮಟ್ಟ ಪುನಃ ಉತ್ತಮ ಪಡಿಸಲು ಕ್ರಮ ವಹಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.