



ಮಂಗಳೂರು: ಗ್ರಾನೈಟ್ ತುಂಬಿದ ಲಾರಿಯ ಪೋಟೋ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಗ್ರಾನೈಟ್ ಬಿದ್ದು ಮೃತಪಟ್ಟ ಘಟನೆ ನಗರದ ಅತ್ತಾವರ ಬಳಿ ನಡೆದಿದೆ. ಮೃತರನ್ನು ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30) ಎಂದು ಗುರುತಿಸಲಾಗಿದೆ
ರಾಜಸ್ಥಾನದಿಂದ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿಯೊಂದು ಅತ್ತಾವರ ಬಳಿಯ ಕಟ್ಟಡ ನಿರ್ಮಾಣವಾಗುತಿದ್ದ ಸ್ಥಳಕ್ಕೆ ಬಂದಿತ್ತು. ಈ ವೇಳೆ ಕಟ್ಟಡದ ರೈಟರ್ ಆಗಿದ್ದ ರಿಲ್ವಾನ್ ರಲ್ಲಿ ಗ್ರಾನೈಟ್ನ ಫೋಟೊ ತೆಗೆಯಲು ಕಟ್ಟಡದ ಸೂಪರ್ ವೈಸರ್ ಸೂಚಿಸಿದ್ದರು. ಅದರಂತೆ ಫೋಟೊ ತೆಗೆಯಲು ಅವರು ಲಾರಿಯ ಹಿಂಬದಿಗೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಲಾರಿಯಲ್ಲಿದ್ದ ಗ್ರಾನೈಟ್ ಏಕಾಏಕಿ ರಿಲ್ವಾನ್ರ ಮೈಮೇಲೆ ಬಿದ್ದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.