



ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ನಿವಾಸಿ 53ವರ್ಷದ ರಾಧಕೃಷ್ಣ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಣಿಪಾಲ ಪೋಲಿಸರು ಮಹಜರು, ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮಣಿಪಾಲ ಆಸ್ಪತ್ರೆಯ ಶವಗಾರಕ್ಕೆ ವೈದ್ಯಕೀಯ ಪರೀಕ್ಷೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ನೆರವಾದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.