



ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಹೀರೆಬೆಟ್ಟು ಗ್ರಾಮದ ಕಂಬಳಕಟ್ಟ ಎಂಬಲ್ಲಿ ನಡೆದಿದೆ.
ಬಂಧಿತರನ್ನು ಕವನ್(37), ಅಪ್ಪಯ್ಯ ಎಲ್ಲಪ್ಪವಾಳದ್(30) ಎಂದು ಗುರುತಿಸಲಾಗಿದೆ. ಇವರಿಂದ ಡ್ರೆಜ್ಜಿಂಗ್ ಮೆಶಿನ್, ಬೋಟ್, ಹಾರೆಗಳು, ಬುಟ್ಟಿ ಹಾಗೂ ಒಂದು ಯುನಿಟ್ ಮರಳು, 407 ಟಿಪ್ಪರ್, ಹಾಗೂ ಲಾರಿಯಲ್ಲಿದ್ದ 1.5ಯುನಿಟ್ ಮರಳು ಮತ್ತು ಹಿಟಾಚಿ ಮೆಷಿನ್ನನ್ನು ವಶಪಡಿಸಿಕೊಳ್ಳಲಾಗಿದೆ.
ಇವುಗಳ ಮೌಲ್ಯ 15,21,500ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.