



ಶಿರ್ಡಿ ಸಾಯಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿದಂತೆ "ಮನ್ವಂತರ" ಎಂಬ ಕಾರ್ಯಕ್ರಮವನ್ನು ಹಮ್ಮಿಕ್ಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಮೋಹನ್ ಪಡಿವಾಳ್, ಸಿಂಡಿಕೇಟ್ ಸದಸ್ಯರು, ಮಂಗಳೂರು ವಿಶ್ವವಿದ್ಯಾನಿಲಯ ಇವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಮಾನ್ಯ ಚಂದ್ರಹಾಸ ಸುವರ್ಣ, ಅಧ್ಯಕ್ಷರು ಸುವರ್ಣ ಚಾರಿಟೇಬಲ್ ಟ್ರಸ್ಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾನ್ಯ ಅಭಿಷೇಕ್ ಸುವರ್ಣ, ಅಧ್ಯಕ್ಷರು ಶಿರ್ಡಿ ಸಾಯಿ ಶಿಕ್ಷಣ ಸಂಸ್ಥೆ, ಮಾನ್ಯ ಆಶೀಷ್ ಶೆಟ್ಟಿ, ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿ, ಶಿರ್ಡಿ ಸಾಯಿ ಪದವಿ ಕಾಲೇಜು, ಕು.ಅಮ್ರತಾ ಪ್ರಾಂಶುಪಾಲರು, ಶಿರ್ಡಿ ಸಾಯಿ ಪದವಿ ಕಾಲೇಜು, ಹಾಗೂ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು. ಇದೇ ಸಂಧರ್ಭದಲ್ಲಿ ಸಂಸ್ಥೆಯಲ್ಲಿ ಉಪನ್ಯಾಸಕಿಯಾಗಿ ಕಳೆದ 7 ವರ್ಷಗಳಿಂದ ಸೇವೆಯನ್ನು ಸಲ್ಲಿಸಿರುವ ಕು. ಅಮ್ರತಾ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.