



ಮಣಿಪಾಲ:
ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಸೆನ್ ಅಪರಾಧ ಪೊಲೀಸರು ಮಣಿಪಾಲ ಪರಿಸರದಲ್ಲಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳಾದ ಕರಣ್ ಆರ್ ಕೆ (21) , ಪೂರ್ಣ ಸೋಮೇಶ್ವರ (23), ನಿಯಾಲ್ ಗೋವೆಸ್ (20) ಹಾಗೂ ಕೆನ್ನೆತ್ ಡಿ'ಸೋಜ (27) ಪೊಲೀಸರು ವಶಕ್ಕೆ ಪಡೆದ ಯುವಕರು. ಈ ನ್ವಾವರು ಮಣಿಪಾಲದ ವಿದ್ಯಾರತ್ನ ನಗರದ ರೊಯಲ್ ಎಂಬಸ್ಸಿ ಬಳಿ ಮಾದಕ ವಸ್ತು ಸೇವಿಸಿದಂತೆ ಕಂಡುಬಂದಿದ್ದು, ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಸೆ.21ರಂದು ಬಂದಿರುವ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ನಾಲ್ವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.