



ಕಾರ್ಕಳ : ಹೆರಿಗೆ ನೋವಿನಿಂದ ಬಳಲುತಿದ್ದ ಗರ್ಭಿಣಿ ಯೋರ್ವಳು ಅಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಜ.೧೨ ರಂದು ಕಾರ್ಕಳ ತಾಲೂಕಿನ ಜೋಡುರಸ್ತೆಯಲ್ಲಿ ನಡೆದಿದೆ. ವರಂಗದ ಶ್ರೀಮತಿ ವನಿತ ರವರು ಹೆರಿಗೆ ನೋವಿನಿಂದ ಬಳಲುತಿದ್ದು ಕಾರ್ಕಳ ೧೦೮ ಅಂಬ್ಯುಲೆನ್ಸ್ ನಲ್ಲಿ ವರಂಗದಿAದ ಕಾರ್ಕಳ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುªಗ ಮಾರ್ಗ ಮಧ್ಯೆ ಜೋಡುರಸ್ತೆ ಬಳಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅಂಬುಲೆನ್ಸ್ ಸಿಬ್ಬಂದಿ ಇಎಂಟಿ ರಾಧಾಮಣಿ ಜಿಕೆ ಹಾಗು ಪೈಲೆಟ್ ಪುಂಡಲೀಕ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಕಾರ್ಕಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.