logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್! ಮೇ.10 ರಂದು ಮತದಾನ, ಮೇ.13ಕ್ಕೆ ಫಲಿತಾಂಶ :

ಟ್ರೆಂಡಿಂಗ್
share whatsappshare facebookshare telegram
29 Mar 2023
post image

ನವದೆಹಲಿ :ರಾಜಕೀಯ ವಲಯದಲ್ಲಿ ತೀವೃ ಕುತೂಹಲಕ್ಕೆ ಎಡೆಮಾಡಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ರಾಜಕೀಯ ಪಕ್ಷಗಳ ರಣಕಲಿಗಳ ಹೋರಾಟಕ್ಕೆ ಚುನಾವಣಾ ಆಯೋಗ ವೇದಿಕೆ ಸಿದ್ಧಗೊಳಿಸಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎ.13 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಎ.20 ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ಎ.21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.24 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ.10 ರಂದು ಮತದಾನ ನಡೆಯಲಿದ್ದು, ಮೇ.13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದರು.

ಚುನಾವಣೆಗೆ ದಿನಾಂಕ ಘೊಷಣೆಯಾದ ಇಂದಿನಿAದಲೇ ಮಾದರಿ ನೀತಿಸಂಹಿತೆ ಜಾರಿಯಾಗಿದ್ದು ಅಧಿಕಾರಿಗಳು ನೀತಿಸಂಹಿತೆ ಉಲ್ಲಂಘನೆಯನ್ನು ಕುರಿತು ಕಠೀಣ ಕ್ರಮ ಜರುಗಿಸಬೇಕೆಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.