logo
WhatsApp Image 2026-04-02 at 14.46.04.jpeg
hindalco everlast.jpeg

ಸಂಗೀತ ದಿಗ್ಗಜ ರಾಘವೇಂದ್ರ ಭಟ್ ಅವರಿಗೆ ನುಡಿನಮನ ಹಾಗೂ ರಂಗಸಂಗೀತ ಪ್ರಾತ್ಯಕ್ಷಿಕೆ

ಟ್ರೆಂಡಿಂಗ್
share whatsappshare facebookshare telegram
10 Dec 2021
post image

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಭರತಾಂಜಲಿ ಉಡುಪಿ ಆಶ್ರಯದಲ್ಲಿ ಡಿಸೆಂಬರ್ 9ರಂದು ಉಡುಪಿಯ ಕಡಿಯಾಳಿ ಯಲ್ಲಿರುವ ಭರತಾಂಜಲಿ ಸಭಾಂಗಣದಲ್ಲಿ ಉಡುಪಿಯ ಹಿರಿಯ ಸಂಗೀತ ನಿರ್ದೇಶಕ ಕೆ. ರಾಘವೇಂದ್ರ ಭಟ್ ಅವರಿಗೆ ನುಡಿನಮನ ಹಾಗೂ ರಂಗ ಸಂಗೀತ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಎನ್ ಎಸ್ ಭಟ್ ಅವರು ಇತ್ತೀಚೆಗೆ ನಿಧನರಾದ ಕೆ ರಾಘವೇಂದ್ರ ಭಟ್ ಅವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ವಹಿಸಿದ್ದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರು ಹಾಗೂ ಗೌರವಾಧ್ಯಕ್ಷರಾದ ಯು ವಿಶ್ವನಾಥ್ ಶೆಣಿೈ ಹಾಗೂ ಭರತಾಂಜಲಿ ಉಡುಪಿಯ ನಿರ್ದೇಶಕಿ ರಶ್ಮಿ ವಿಜಯೇಂದ್ರ ಉಪಸ್ಥಿತರಿದ್ದರು.

ರಂಗಾಯಣ ಮೈಸೂರು ಇದರ ಸಂಗೀತ ನಿರ್ದೇಶಕರಾಗಿದ್ದ ಶ್ರೀನಿವಾಸ್ ಭಟ್ (ಚೀನಿ ) ಅವರು ರಂಗಸಂಗೀತದ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ ಸ್ವಾಗತಿಸಿ ರಾಜೇಶ್ ಭಟ್ ಅವರು ಧನ್ಯವಾದ ನೀಡಿದರು. ರವಿರಾಜ್ ಎಚ್.ಪಿ ಕಾರ್ಯಕ್ರಮ ನಿರೂಪಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.