logo
WhatsApp Image 2026-04-02 at 14.46.04.jpeg
hindalco everlast.jpeg

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ

ಟ್ರೆಂಡಿಂಗ್
share whatsappshare facebookshare telegram
28 Aug 2026
post image

ಬೆಂಗಳೂರು:** ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಮೊದಲ ರಾಜೀನಾಮೆ ಹೊರಬಿದ್ದಿದೆ. ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಣ್ಣೀರಿಡುತ್ತಲೇ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದರು.

ವಿಪಕ್ಷಗಳು ವಿಧಾನಸಭೆಯ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದ ನಾಗೇಂದ್ರ, “ಸದನ ನಡೆಯಲು ವಿಪಕ್ಷಗಳು ಬಿಡಲಿಲ್ಲ. ಅಜೆಂಡಾ ಇಲ್ಲದೆ, ವಿಷಯವಿಲ್ಲದೆ ಹೋರಾಟ ನಡೆಸಿದರು” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ, ಕೆಪಿಎಸ್‌ಸಿ ಹಗರಣ, ಕಾವೇರಿ ವಿಚಾರ ಹಾಗೂ ಕಸ್ತೂರಿರಂಗನ್ ವರದಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲು ಅವಕಾಶ ನೀಡಲಿಲ್ಲ ಎಂದು ಅವರು ಆರೋಪಿಸಿದರು. ಶಾಸಕರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಕೂಡ ಅವಕಾಶ ನೀಡಲಿಲ್ಲ ಎಂದರು.

‘ಸಂವಿಧಾನ ನಮ್ಮ ರಕ್ಷಣೆ ಮಾಡುತ್ತದೆ’

ತಮ್ಮ ವಿರುದ್ಧದ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ನಾಗೇಂದ್ರ, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರು ರಾಜಕೀಯವಾಗಿ ಮೇಲೆ ಬರಬಾರದು ಎಂಬ ಮನಸ್ಥಿತಿ ಕೆಲವರಲ್ಲಿದೆ ಎಂದು ಆರೋಪಿಸಿದರು.

“ಇದು ವೇದಕಾಲವಲ್ಲ, ಪುರಾಣ ಕಾಲವೂ ಅಲ್ಲ. ಇದು ಸಂವಿಧಾನದ ಕಾಲ, ಅಂಬೇಡ್ಕರ್ ಯುಗ. ಮನುವಾದಿಗಳಿಗೆ ನಾವು ಬಗ್ಗುವುದಿಲ್ಲ. ಸಂವಿಧಾನಕ್ಕೆ ಗೌರವ ನೀಡುತ್ತೇವೆ” ಎಂದು ಹೇಳಿದರು.

ತನಿಖೆ ಬಗ್ಗೆ ಸ್ಪಷ್ಟನೆ

ತಮ್ಮ ವಿರುದ್ಧದ ತನಿಖೆ ವಿಚಾರದಲ್ಲೂ ನಾಗೇಂದ್ರ ಸ್ಪಷ್ಟನೆ ನೀಡಿದರು. ಎಸ್‌ಐಟಿ ಹಾಗೂ ಸಿಒಡಿ ತನಿಖಾ ಸಂಸ್ಥೆಗಳ ಬಗ್ಗೆ ತಮಗೆ ಗೌರವವಿದೆ. ಆದರೆ ಜಾರಿ ನಿರ್ದೇಶನಾಲಯ (ED) ಮತ್ತು ಸಿಬಿಐ ತನಿಖೆ ನಡೆಸಿ ತಮ್ಮನ್ನು ಬಂಧಿಸಿದ್ದವು. ಬಳಿಕ ತಾವು ಜಾಮೀನು ಪಡೆದಿರುವುದಾಗಿ ತಿಳಿಸಿದರು.

ಮೊದಲ ಚಾರ್ಜ್‌ಶೀಟ್‌ನಲ್ಲಿ ಸಿಬಿಐ ತಮ್ಮ ಹೆಸರನ್ನು ಉಲ್ಲೇಖಿಸಿರಲಿಲ್ಲ. ಆದರೆ ತಾವು ಸಚಿವರಾದ ಬಳಿಕ ಎರಡನೇ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರನ್ನು ಸೇರಿಸಲಾಗಿದೆ ಎಂದು ಆರೋಪಿಸಿದರು. ರಾಜ್ಯದ ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

‘ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಿ’

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವುದನ್ನು ಸ್ವಾಗತಿಸುವುದಾಗಿ ನಾಗೇಂದ್ರ ಹೇಳಿದರು. ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳಿಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.

“ನನಗೆ ಒಂದು ನ್ಯಾಯ, ಅವರಿಗೆ ಒಂದು ನ್ಯಾಯವೇ? ಪಿಕ್‌ ಅಂಡ್‌ ಚ್ಯೂಸ್ ಮಾಡಲಾಗಿದೆ. ಕುಮಾರಸ್ವಾಮಿ ಅವರ ವಿಚಾರವನ್ನು ಯಾಕೆ ಕಳುಹಿಸಲಿಲ್ಲ?” ಎಂದು ಪ್ರಶ್ನಿಸಿದರು.

ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆ ಆರಂಭವಾಗಿದ್ದು, ನಾಗೇಂದ್ರ ಅವರ ರಾಜೀನಾಮೆಯ ನಂತರ ಸರ್ಕಾರದ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.